ಚಿಕ್ಕಮಗಳೂರು ಶ್ರೀ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಬಿ.ಇ ತರಗತಿಗಳ ಪ್ರಾರಂಭೋತ್ಸವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು ಸಮಾರಂಭದಲ್ಲಿ ಪೂಜ್ಯ ಶ್ರೀ ಗುಣನಾಥ ಸ್ವಾಮೀಜಿಗಳವರು, ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಗಳವರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

