ಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಆವರಣದಲ್ಲಿ ಶ್ರೀ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿಸಲಾಗಿದ್ದ *ಕೋವಿಡ್ -19 ಸಂಕಷ್ಟ ಪರಿಹಾರ ದಿನಸಿ ಸಾಮಗ್ರಿಗಳನ್ನು* ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರು* ನೀಡಿ ಆಶೀರ್ವದಿಸಿದರು. ಇದೇ ಸಂದರ್ಭದಲ್ಲಿ ಪೂಜ್ಯ ಶ್ರೀ ಮಂಗಳನಾಥ ಸ್ವಾಮೀಜಿಗಳವರು, *ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಡಾ. ಕೆ ಸುಧಾಕರ್ ರವರು* ಉಪಸ್ಥಿತರಿದ್ದರು.


