ರಾಜ್ಯದಲ್ಲಿಯೇ ಮೀಸಲು ಕ್ಷೇತ್ರದಿಂದ ಅತ್ಯಧಿಕ ಮತಗಳನ್ನು ಪಡೆದು ಆಯ್ಕೆಯಾಗಿರುವ ಪ್ರಾಮಾಣಿಕ ದಕ್ಷ ಆಡಳಿತಗಾರರಾಗಿದ್ದ ದಿವಂಗತ ಶ್ರೀ ಬಿ ರಾಚಯ್ಯನವರ ಪುತ್ರ ಎ ಆರ್ ಕೃಷ್ಣಮೂರ್ತಿ ರವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ಹಾಗೂ ಅಖಿಲ ಭಾರತ ವೀರಶೈವ ಮಹಸಭಾ ಜಿಲ್ಲಾ ಯುವ ಘಟಕ ಚಾಮರಾಜನಗರ ನಿರ್ದೇಶಕರಾದ ಆನಂದ್ ಹೊನ್ನೂರು ರವರು ಒತ್ತಾಯ ಮಾಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಮತ್ತು ಮುಖ್ಯಮಂತ್ರಿರವರನ್ನು ಒತ್ತಾಯಿಸುತ್ತೇನೆ.
ಶಾಸಕರಾದ ಎ ಆರ್ ಕೃಷ್ಣಮೂರ್ತಿರವರು ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತನ್ನದೇಯಾದ ವರ್ಚಸ್ಸುಹೊಂದಿದ್ದು ಚಾಮರಾಜನಗರ ಜಿಲ್ಲೆಯ ನಾಡಿಮಿಡಿತ ಅರಿತವರಾಗಿದ್ದಾರೆ ಇವರಿಗೆ ರಕ್ತಗತವಾಗಿ ಆಡಳಿತಾತ್ಮಕ ಅನುಭವವಿದ್ದು,ಇವರು ದಕ್ಷತೆ ಮತ್ತು ಪ್ರಾಮಾಣಿಕತೆವುಳ್ಳ ಜನಪರ ರಾಜಕಾರಣಿಯಾಗಿದ್ದಾರೆ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ತೊಡಗಿಸಿಕೊಂಡಿರುವ ಇವರನ್ನು ಸಚಿವರನ್ನಾಗಿ ಮಾಡುವ ಮೂಲಕ ಚಾಮರಾಜನಗರ ಜಿಲ್ಲಾ ಕೇಂದ್ರವಾದ ನಂತರ ಇದುವರೆಗೆ ಒಮ್ಮೆಯೂ ದಲಿತ ಸಮುದಾಯಕ್ಕೆ ಸೇರಿದ ಶಾಸಕರುಗಳಿಗೆ ಸಚಿವರಾಗುವ ಅವಕಾಶ ಸಿಕ್ಕಿರುವುದಿಲ್ಲ ಅಲ್ಲದೆ ಕೊಳ್ಳೇಗಾಲ ಕ್ಷೇತ್ರದ ಯಾವೊಬ್ಬ ಜನಪ್ರತಿನಿಧಿಯೂ ಇದುವರೆಗೆ ಸಚಿವರಾಗಿಲ್ಲದಿರುವ ಕೊರತೆಯನ್ನು ನೀಗಿಸುವ ಸಲುವಾಗಿ ಬೇಕಾಗಿರುವ ಈ ಎಲ್ಲಾ ಹಿನ್ನೆಲೆಯನ್ನು ಕಾಂಗ್ರೆಸ್ ಹೈಕಮಾಂಡ್ ಮನಗಂಡು ಎ ಆರ್ ಕೃಷ್ಣಮೂರ್ತಿಯವರನ್ನು ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಸಚಿವರನ್ನಾಗಿ ಮಾಡಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಬೇಕೆಂದು ಒತ್ತಾಯ ಮಾಡಿದ್ದಾರೆ.
ವರದಿ ಹೊನ್ನೂರು ಪರಮೇಶ್
